Yeddyurappa, Nadahalli's portrait set on fire and anger

ಯಡಿಯೂರಪ್ಪ, ನಡಹಳ್ಳಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ಯಡಿಯೂರಪ್ಪ, ನಡಹಳ್ಳಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ತಾಳಿಕೋಟೆ: ಕೇಂದ್ರ ಮಾಜಿ ಸಚಿವ ವಿಜಯಪುರ ನಗರದ ಹಾಲಿ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವದನ್ನು ಖಂಡಿಸಿ ಮಿಣಜಗಿ ಗ್ರಾಮದ ಹಿಂದೂಪರ ಸಂಘಟಿಕರು ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರಲ್ಲದೇ ಬಿ.ಎಸ್.ಯಡಿಯೂರಪ್ಪ, ವಿಜೇಂದ್ರ ಯಡಿಯೂರಪ್ಪ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವದರೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮಿಣಜಗಿ ಗ್ರಾಮದಲ್ಲಿ ಬೆಳಿಗ್ಗೆಯಿಂದಲೇ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವದರೊಂದಿಗೆ ಪ್ರತಿಭಟನಾ ಮೇರವಣಿಗೆಗೆ ಬೆಂಬಲಿಸಿದ ಸಾವಿರಾರು ಜನ ಗ್ರಾಮಸ್ಥರರು ಸುಮಾರು ೬ ಗಂಟೆ ಕಾಲ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರಲ್ಲದೇ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷಕ್ಕೆ ಗೌರವವಿತವಾಗಿ ಮರು ಸೇರ್ಪಡೆ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಹಿಂದೂ ಸಮಾಜ ಬಿಜೆಪಿ ಪಕ್ಷದಿಂದ ಸಂಪೂರ್ಣ ಹಿಂದಕ್ಕೆ ಸರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗ್ರಾಮದ ಸುಮಾರು ಹತ್ತಾರು ಕಡೆಗಳನ್ನು ಯಡಿಯೂರಪ್ಪನವರ ಹಾಗೂ ಮಾಜಿ ಶಾಸಕ ನಡಹಳ್ಳಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಮಿಣಜಗಿ ಗ್ರಾಮದ ದ್ವಾರ ಭಾಗಿಲಿನಿಂದ ಪ್ರಾರಂಭಗೊಂಡ ಬೃಹತ್ ಪ್ರತಿಭಟನಾ ಮೇರವಣಿಗೆಯೂ ತಾಳಿಕೋಟೆ ರಸ್ತೆಯ ತೆರಳಿ ಮರಳಿ ಸಂತ ಸೇವಾಲಾ ವೃತ್ತದವರೆಗೆ ಹೋಗಿ ಮರಳಿ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಗಂಟೆಕಾಲ ರಸ್ತೆ ತಡೆ ನಡೆಸಿ ನಂತರ ಭಹಿರಂಗ ಸಭೆಯಾಗಿ ಮಾರ್ಪಟ್ಟಿತು.

ಈ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಮಾತನಾಡಿ ಬಸನಗೌಡ ಪಾಟೀಲ(ಯತ್ನಾಳ) ಅವರು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ ನೆಲೆ ನಿಲ್ಲಿಸಿದ್ದಾರೆ. ಸದ್ಯ ಇಡೀ ಕರ್ನಾಟಕದ ತುಂಬೆಲ್ಲಾ ಪಕ್ಷ ಸಂಘಟನೆ ಮಾಡುತ್ತಾ ಸಾಗಿದ್ದರು ಪಕ್ಷಕ್ಕೆ ಮುಳ್ಳವಾಗಿ ಪರಿಣಮಿಸುವದರೊಂದಿಗೆ ಅಪ್ಪ ಮಕ್ಕಳು ಇಬ್ಬರೂ ಕೂಡಿ ಬಿಜೆಪಿ ಪಕ್ಷವನ್ನು ಮೂಲಿ ಗುಂಪು ಮಾಡಲು ಹೋರಟಿದ್ದಾರೆ. ಅವರ ವಿರುದ್ದ ದ್ವನಿ ಎತ್ತಿದ್ದಾರೆ. ಇದನ್ನು ಪಕ್ಷದ ಹೈಕಮಾಂಡನವರು ನೋಡಬೇಕಿತ್ತು. ಆದರೆ ಯಾರದೋ ಮಾತಿಗೆ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿರುವದು ಸರಿಯಲ್ಲಾ. ಕೂಡಲೇ ಅವರನ್ನು ಬಿಜೆಪಿ ಪಕ್ಷಕ್ಕೆ ಗೌರವಿತವಾಗಿ ಸೇರ್ಪಡೆ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ನಡಹಳ್ಳಿ ಅವರು ತೊಗಲಿನ ನಾಲಿಗೆ ಇದೆ ಎಂದು ಯತ್ನಾಳ ಅವರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಅವರಿಗೆ ಏಚ್ಚರಿಕೆಯನ್ನು ಕೊಡುತ್ತೇನೆ. ಯತ್ನಾಳ ಅವರು ಕರ್ನಾಟಕದ ಹಿಂದೂ ಹುಲಿ ಎಂದು ಜನರೇ ಬಿರುದುಕೊಟ್ಟಿದ್ದಾಗಿದೆ. ಇನ್ನ ನೀನು ಯಾವ ಲೆಕ್ಕ ಇದೇ ಮುದ್ದೇಬಿಹಾಳದಲ್ಲಿಯೇ 1 ಲಕ್ಷ ಜನರನ್ನು ಸೇರಿಸಿ ಬೃಹತ್ ಹೋರಾಟ ಮಾಡಿ ತೋರಿಸುತ್ತೇವೆ ಬೇಕಿದ್ದರೆ ಜನರ ಲೆಕ್ಕ ಹಾಕಿಕೊಂಡು ಹೋಗಲಿ ಎಂದು ಗುಡುಗಿದರು. ನಡಹಳ್ಳಿ ಅವರಿಗೆ ಅಳಗಾಲ ಬಂದಿದೆ ಹೀಗಾಗಿ ಯತ್ನಾಳ ಅವರ ಹಗುರವಾಗಿ ಮಾತನಾಡುತ್ತಿದ್ದಾರೆ. ಇದರ ಪರಿಣಾಮ ಒಮ್ಮೇ ಈಗಾಗಲೇ ಚುನಾವಣೆಯಲ್ಲಿ ಸೋಲಿಸಿ ತೋರಿಸಿದ್ದೇವೆ ಇನ್ನೊಮ್ಮೇ ಮಾಡಿ ತೋರಿಸುತ್ತೇವೆಂದು ಏಚ್ಚರಿಸಿದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು