Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ