Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು