Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ