Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ