Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ