Yoga day inspiration for building great India

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆ

ಮುಧೋಳ: ಮಹಾನ್ ನಾಯಕರ ಕನಸಿನಂತೆ ಭವ್ಯ ಭಾರತ ನಿರ್ಮಾಣಕ್ಕೆ ಯೋಗ ದಿನ ಪ್ರೇರಣೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಶಿವಕುಮಾರ ಎಸ್ ಮಲಘಾಣ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಶ್ರೀ ‌ಸಂಗಮನಾಥ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ‌ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗ ಶಿಕ್ಷಕ ಬಿ ಅರ್ ಸಿ ಐ.ಸಿ. ಮಠಪತಿ ಮಾತನಾಡಿ, ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ವಿಶ್ವದ ಅಂದಾ ಜು 190 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಯೋಗದ ರಾಯಬಾರಿಯಾಗಿ ನಮ್ಮ ಪ್ರಧಾನಿಯವರು ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ್ದಾರೆ ನಮ್ಮ ಸನಾತನ ಸಂಸ್ಕೃತಿಯ ಭಾಗವಾದ ಯೋಗ, ಆಯುರ್ವೇದ ಹಾಗೂ ಆಧ್ಯಾತ್ಮಿಕತೆಯನ್ನು ಉಳಿಸಿ, ಬೆಳೆಸುವ ಕಾರ್ಯವಾಗಬೇಕು ಎಂದು ಹೇಳಿದರು.

ಎಪಿಎಂಸಿ ಉಪಾಧ್ಯಕ್ಷ‌ ಬೀಮಸಿ ಮೆಟಗುಡ್ಡ ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ, ಯೋಗ ಶಿಕ್ಷಕ ಐ.ಸಿ. ಮಠಪತಿ, ಮುಖ್ಯ ಶಿಕ್ಷಕ‌ ವೆಂಕಟೇಶ‌ ಗುಡೆಪ್ಪನವರ ಪ್ರಾಚಾರ್ಯ ಸುರೇಶ್ ಭಜಂತ್ರಿ ಇತರರಿದ್ದರು.

ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆಯ ‌ನಿಮಿತ್ಯ ವಿವಿದ ಭಂಗಿಯ ಯೋಗ ನೃತ್ಯ ಹಾಗೂ ಸಂಗೀತ ದಿನಾಚರಣೆಯ‌ ನೃತ್ಯ ಹಾಗೂ ಗಾಯನ ಜರುಗಿದವು. ಭವಾನೇಶ್ವರಿ ಲೋಂಡೆ‌ ನಿರೂಪಿಸಿ ವಂದಿಸಿದರು

ಮುಧೋಳ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿ.ಪಂ ಮಾಜಿ‌ ಅಧ್ಯಕ್ಷ ಶಿವಕುಮಾರ ಮಲಘಾಣ ಉದ್ಘಾಟಿಸಿದರು. ಎಪಿಎಂಸಿ ಉಪಾಧ್ಯಕ್ಷ ಭೀಮಸಿ ಮೆಟಗುಡ್ಡ, ಮಲ್ಲು ಕಳ್ಳೆನ್ನವರ, ಐ.ಸಿ. ಮಠಪತಿ, ಸುರೇಶ ಭಜಂತ್ರಿ, ವೆಂಕಟೇಶ ಗುಡೆಪ್ಪನವರ ಇತರರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ