Yoga Ratna-2025 Award Ceremony

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಟಿವಿ ಮಾಧ್ಯಮದ ಸುದ್ದಿ ನಿರೂಪಕರಿಗೆ, ಸಾಮಾಜಿಕ ಜಾಲತಾಣದಲ್ಲಿ ಯೋಗ ಹಾಗೂ ಫಿಟ್ ನೆಸ್ ಕುರಿತು ಅರಿವು ಮೂಡಿಸುತ್ತಿರುವ ಇನ್ ಫ್ಲುಯನ್ಸರ್ ಗಳಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ ಸಂಸ್ಥಾಪಕರು, ಶ್ವಾಸ ಯೋಗ ಸಂಸ್ಥೆ ಹಾಗೂ ಖ್ಯಾತ ಯೋಗ ಗುರು ಇವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಹಾಗೂ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಎಸ್ ಲಾಡ್ ಅವರು ಉಪಸ್ಥಿತರಿರಲಿದ್ದಾರೆ.

ಖ್ಯಾತ ಗಾಯಕರಾದ ಎಮ್ ಡಿ ಪಲ್ಲವಿ ಹಾಗೂ ವಾಸು ದೀಕ್ಷಿತ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ India’s Got Talent ಸ್ಪರ್ಧಾಳುಗಳಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು