‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕ್ಷೇತ್ರದ ಶಾಸಕರು, ಮಾಜಿ ಶಾಸಕರು ರೈತರ ಋಣದಲ್ಲಿದ್ದೀರಿ.ನೀವು ಬಂದು ಬೆಂಬಲ ಕೊಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಎಲ್ಲ ಕಾರ್ಖಾನೆಗಳು ರಾಜಕಾರಣಿಗಳದ್ದೇ ಇವೆ. ರೈತರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಚಿವ ಶಿವಾನಂದ ಪಾಟೀಲರು ಹಿಂದೆ ಕಬ್ಬಿನ ತೂಕದಲ್ಲಿ ಕಾರ್ಖಾನೆಯವರಿಂದ ಮೋಸವಾಗುತ್ತಿದೆ. ಸರ್ಕಾರದಿಂದಲೇ ತೂಕದ ಯಂತ್ರ ಹಾಕುವುದಾಗಿ ತಿಳಿಸಿದ್ದರು.ಅವರು ಕಬ್ಬಿನ ಕಾರ್ಖಾನೆಗಳ ಮಾಲೀಕರು ಭೇಟಿಯಾದ ನಂತರ ಮೌನಕ್ಕೆ ಶರಣವಾಗಿದ್ದಾರೆ ಎಂದು ದೂರಿದರು.

ಪಕ್ಕದ ನಾಯನೇಗಲಿ ಶುಗರ್ಸ್ನವರು ಟನ್ಗೆ 3200 ಕೊಡುತ್ತಿದ್ದಾರೆ.ಆದರೆ ಇಲ್ಲಿಯ ಬಾಲಾಜಿ ಕಾರ್ಖಾನೆಯವರು 300 ರೂ.ಕಡಿಮೆ ಕೊಡುತ್ತಿದ್ದಾರೆ.ಈ ಭಾಗದ ಕಾರ್ಖಾನೆಗೆ ದೂರ ಊರಿನ ಕಬ್ಬನ್ನು ಮೊದಲು ಸಾಗಿಸುತ್ತಾರೆ. ನಂತರ ಸ್ಥಳೀಯ ರೈತರ ಕಬ್ಬನ್ನು ತರಿಸಿಕೊಳ್ಳುವುದರಿಂದ ಇಳುವರಿ ಕಡಿಮೆ ಬರುತ್ತಿದೆ.ಅದೇ ನಮ್ಮ ಭಾಗದ ಕಬ್ಬು ನಾಯನೇಗಲಿ ಕಾರ್ಖಾನೆಗೆ ಹೋದಾಗ ಕಬ್ಬು ರಿಕವರಿ ಬರುತ್ತಿದೆ. ನಿಮ್ಮಲ್ಲೇಕೆ ಬರುವುದಿಲ್ಲ ಎಂದು ಪ್ರಶ್ನಿಸಿದರು.

ನಮ್ಮ ಭಾಗದ ಕಬ್ಬಿನಲ್ಲಿ ಮೈಸೂರು,ಮಂಡ್ಯ ಜಿಲ್ಲೆಗಳಲ್ಲಿ ಬೆಳೆಯುವ ಕಬ್ಬಿಗಿಂತ ಹೆಚ್ಚಿನ ಸಕ್ಕರೆ ಅಂಶ ಇದೆ.ಗೊಬ್ಬರ ಕೊಡುತ್ತೇವೆ ಎಂದು ಟನ್ 100 ರೂ.ಗೆ ಕಡಿತ ಮಾಡುತ್ತಿದ್ದಾರೆ.ಅವರು ಕೊಡುತ್ತಿರುವುದು ನಕಲಿ ಗೊಬ್ಬರವಾಗಿದೆ.ಸರಕಾರದ ಆದೇಶ ಇಲ್ಲದೇ ನೀವು ಏಕೆ ಗೊಬ್ಬರ ಕೊಡುತ್ತಿದ್ದೀರಿ ಎಂದು ಕೇಳಿದರು.ನಮ್ಮ ರೈತರು ಜಾಗೃತರಿರಬೇಕು.ನಮ್ಮನಮ್ಮಲ್ಲಿಯೇ ಜಗಳ ಹಚ್ಚುವ ಜನ ಇರುತ್ತಾರೆ ಎಂಬುದನ್ನು ಅರಿತುಕೊಂಡುನ್ಯಾಯಯುತ ಬೆಲೆ ದೊರಕುವವರೆಗೂ ನಾನು ಹೋರಾಟದಲ್ಲಿ ಇರುತ್ತೇನೆ ಎಂದು ಹೇಳಿದರು.

ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ರೈತರು ದೇಶಕ್ಕೆ ಅನ್ನ ಕೊಡುವ ಕೆಲಸ ಮಾಡುತ್ತಿದ್ದಾನೆ.ಆತನಿಗೆ ನ್ಯಾಯಯುತವಾಗಿ ದೊರೆಯಬೇಕಾದ ಬೆಲೆ ದೊರಕುವವರೆಗೂ ಶ್ರೀ ಮಠದ ಬೆಂಬಲ ಹೋರಾಟಕ್ಕೆ ಇರಲಿದೆ ಎಂದು ಹೇಳಿದರು.

ಹೋರಾಟವನ್ನುದ್ದೇಶಿಸಿ ಮುಖಂಡರಾದ ಶಿವನಗೌಡ ಬಿರಾದಾರ ಜಲಪೂರ, ಶಿವು ಕನ್ನೊಳ್ಳಿ, ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಶಶಿಧರ ಬಂಗಾರಿ ಮತ್ತಿತರರು ಮಾತನಾಡಿದರು.ಮುಖಂಡರಾದ ಸೋಮನಗೌಡ ಕೋಳೂರ,ಬಸನಗೌಡ ಪಾಟೀಲ,ಮೈಬೂಬ ಹಡಲಗೇರಿ,ಗುರುಸಂಗಪ್ಪ ಹಡಲಗೇರಿ, ಸಂಗಪ್ಪ ಬಾಗೇವಾಡಿ,ಮುತ್ತು ಮೇಟಿ,ಶ್ರೀಕಾಂತ ನಾಡಗೌಡ,ರಾಜು ತಿಳಗೂಳ,ಹಣಮಂತ್ರಾಯ ತುಂಬಗಿ,ಅಮರಪ್ಪ ನವಲಿ,ವಿಜಯ ಹಿರೇಗೌಡರ,ಇಮಾಮಸಾಬ ಮುಲ್ಲಾ, ಶಿವರಾಜ ಬಿರಾದಾರ ಪಾಲ್ಗೊಂಡಿದ್ದರು.

3 ಕಿ.ಮೀವರೆಗೂ ಸಾಲುಗಟ್ಟಿ ನಿಂತ ಟ್ರಾಕ್ಟರಗಳು :ಕಬ್ಬು ಕಟಾವು ಕಾರ್ಯ ಹಾಗೂ ನುರಿಸುವ ಕಾರ್ಯ ಬಂದ್ ಮಾಡಿದ್ದರಿಂದ ಅಮರಗೋಳ ಕ್ರಾಸ್ನಿಂದ ಗಂಗೂರ ಕ್ರಾಸ್ದವರೆಗೂ ಕಬ್ಬು ತುಂಬಿದ್ದ ಟ್ರಾಕ್ಟರಗಳು ಸಾಲುಗಟ್ಟಿ ನಿಂತಿದ್ದವು.ಅoದಾಜು 3 ಕಿ.ಮೀ ದೂರದವರೆಗೆ ಟ್ರಾö್ಯಕ್ಟರ್ಗಳು ನಿಂತುಕೊAಡಿದ್ದು ಅದರಲ್ಲಿ ಚಾಲಕರು ಸ್ಥಳದಲ್ಲಿಯೇ ಬುತ್ತಿ ಕಟ್ಟಿಕೊಂಡು ಬಂದು ಊಟ ಮಾಡುತ್ತ ಕೂತಿರುವ ದೃಶ್ಯಗಳು ಕಂಡು ಬಂದವು.ಹೋರಾಟದ ಸ್ಥಳದಲ್ಲಿಯೇ ಕೆಲವು ಮುಖಂಡರು ರೈತರಿಗೆ,ಟ್ರಾö್ಯಕ್ಟರ್ ಚಾಲಕರಿಗೆ ದಾಸೋಹಕ್ಕಾಗಿ ಸಹಾಯ ಮಾಡುತ್ತಿರುವುದು ಕಂಡು ಬಂದಿತು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ