‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

‘ರೈತರ ಆಶೀರ್ವಾದದಿಂದ ನೀವು ಶಾಸಕರಾಗಿದ್ದೀರಿ, ಅವರ ಬೆಂಬಲಕ್ಕೆ ನಿಲ್ಲಿ’-ಶಾಂತಗೌಡ ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಕಬ್ಬು ಬೆಳೆದಿರುವ ರೈತರು ಕೇಳುತ್ತಿರುವ ನ್ಯಾಯಯುತ ಬೆಲೆ 3500 ರೂ ಘೋಷಣೆ ಮಾಡದೇ ಸರ್ಕಾರ ಮೌನವಾಗಿದೆ.ಕ್ಷೇತ್ರದ ಶಾಸಕರು ರೈತರಿಂದಲೇ ಶಾಸಕರಾಗಿದ್ದೀರಿ ಅವರಿಗೆ ಬೆಂಬಲ ನೀಡುವ ಕಾರ್ಯ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ತಂಗಡಗಿ ಸಮೀಪದ ಅಮರಗೋಳ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಬ್ಬಿಗೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ನಡೆದಿರುವ ಮೂರನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕ್ಷೇತ್ರದ ಶಾಸಕರು, ಮಾಜಿ ಶಾಸಕರು ರೈತರ ಋಣದಲ್ಲಿದ್ದೀರಿ.ನೀವು ಬಂದು ಬೆಂಬಲ ಕೊಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಎಲ್ಲ ಕಾರ್ಖಾನೆಗಳು ರಾಜಕಾರಣಿಗಳದ್ದೇ ಇವೆ. ರೈತರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಚಿವ ಶಿವಾನಂದ ಪಾಟೀಲರು ಹಿಂದೆ ಕಬ್ಬಿನ ತೂಕದಲ್ಲಿ ಕಾರ್ಖಾನೆಯವರಿಂದ ಮೋಸವಾಗುತ್ತಿದೆ. ಸರ್ಕಾರದಿಂದಲೇ ತೂಕದ ಯಂತ್ರ ಹಾಕುವುದಾಗಿ ತಿಳಿಸಿದ್ದರು.ಅವರು ಕಬ್ಬಿನ ಕಾರ್ಖಾನೆಗಳ ಮಾಲೀಕರು ಭೇಟಿಯಾದ ನಂತರ ಮೌನಕ್ಕೆ ಶರಣವಾಗಿದ್ದಾರೆ ಎಂದು ದೂರಿದರು.

ಪಕ್ಕದ ನಾಯನೇಗಲಿ ಶುಗರ್ಸ್ನವರು ಟನ್ಗೆ 3200 ಕೊಡುತ್ತಿದ್ದಾರೆ.ಆದರೆ ಇಲ್ಲಿಯ ಬಾಲಾಜಿ ಕಾರ್ಖಾನೆಯವರು 300 ರೂ.ಕಡಿಮೆ ಕೊಡುತ್ತಿದ್ದಾರೆ.ಈ ಭಾಗದ ಕಾರ್ಖಾನೆಗೆ ದೂರ ಊರಿನ ಕಬ್ಬನ್ನು ಮೊದಲು ಸಾಗಿಸುತ್ತಾರೆ. ನಂತರ ಸ್ಥಳೀಯ ರೈತರ ಕಬ್ಬನ್ನು ತರಿಸಿಕೊಳ್ಳುವುದರಿಂದ ಇಳುವರಿ ಕಡಿಮೆ ಬರುತ್ತಿದೆ.ಅದೇ ನಮ್ಮ ಭಾಗದ ಕಬ್ಬು ನಾಯನೇಗಲಿ ಕಾರ್ಖಾನೆಗೆ ಹೋದಾಗ ಕಬ್ಬು ರಿಕವರಿ ಬರುತ್ತಿದೆ. ನಿಮ್ಮಲ್ಲೇಕೆ ಬರುವುದಿಲ್ಲ ಎಂದು ಪ್ರಶ್ನಿಸಿದರು.

ನಮ್ಮ ಭಾಗದ ಕಬ್ಬಿನಲ್ಲಿ ಮೈಸೂರು,ಮಂಡ್ಯ ಜಿಲ್ಲೆಗಳಲ್ಲಿ ಬೆಳೆಯುವ ಕಬ್ಬಿಗಿಂತ ಹೆಚ್ಚಿನ ಸಕ್ಕರೆ ಅಂಶ ಇದೆ.ಗೊಬ್ಬರ ಕೊಡುತ್ತೇವೆ ಎಂದು ಟನ್ 100 ರೂ.ಗೆ ಕಡಿತ ಮಾಡುತ್ತಿದ್ದಾರೆ.ಅವರು ಕೊಡುತ್ತಿರುವುದು ನಕಲಿ ಗೊಬ್ಬರವಾಗಿದೆ.ಸರಕಾರದ ಆದೇಶ ಇಲ್ಲದೇ ನೀವು ಏಕೆ ಗೊಬ್ಬರ ಕೊಡುತ್ತಿದ್ದೀರಿ ಎಂದು ಕೇಳಿದರು.ನಮ್ಮ ರೈತರು ಜಾಗೃತರಿರಬೇಕು.ನಮ್ಮನಮ್ಮಲ್ಲಿಯೇ ಜಗಳ ಹಚ್ಚುವ ಜನ ಇರುತ್ತಾರೆ ಎಂಬುದನ್ನು ಅರಿತುಕೊಂಡುನ್ಯಾಯಯುತ ಬೆಲೆ ದೊರಕುವವರೆಗೂ ನಾನು ಹೋರಾಟದಲ್ಲಿ ಇರುತ್ತೇನೆ ಎಂದು ಹೇಳಿದರು.

ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ತಂಗಡಗಿ ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ರೈತರು ದೇಶಕ್ಕೆ ಅನ್ನ ಕೊಡುವ ಕೆಲಸ ಮಾಡುತ್ತಿದ್ದಾನೆ.ಆತನಿಗೆ ನ್ಯಾಯಯುತವಾಗಿ ದೊರೆಯಬೇಕಾದ ಬೆಲೆ ದೊರಕುವವರೆಗೂ ಶ್ರೀ ಮಠದ ಬೆಂಬಲ ಹೋರಾಟಕ್ಕೆ ಇರಲಿದೆ ಎಂದು ಹೇಳಿದರು.

ಹೋರಾಟವನ್ನುದ್ದೇಶಿಸಿ ಮುಖಂಡರಾದ ಶಿವನಗೌಡ ಬಿರಾದಾರ ಜಲಪೂರ, ಶಿವು ಕನ್ನೊಳ್ಳಿ, ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಶಶಿಧರ ಬಂಗಾರಿ ಮತ್ತಿತರರು ಮಾತನಾಡಿದರು.ಮುಖಂಡರಾದ ಸೋಮನಗೌಡ ಕೋಳೂರ,ಬಸನಗೌಡ ಪಾಟೀಲ,ಮೈಬೂಬ ಹಡಲಗೇರಿ,ಗುರುಸಂಗಪ್ಪ ಹಡಲಗೇರಿ, ಸಂಗಪ್ಪ ಬಾಗೇವಾಡಿ,ಮುತ್ತು ಮೇಟಿ,ಶ್ರೀಕಾಂತ ನಾಡಗೌಡ,ರಾಜು ತಿಳಗೂಳ,ಹಣಮಂತ್ರಾಯ ತುಂಬಗಿ,ಅಮರಪ್ಪ ನವಲಿ,ವಿಜಯ ಹಿರೇಗೌಡರ,ಇಮಾಮಸಾಬ ಮುಲ್ಲಾ, ಶಿವರಾಜ ಬಿರಾದಾರ ಪಾಲ್ಗೊಂಡಿದ್ದರು.

3 ಕಿ.ಮೀವರೆಗೂ ಸಾಲುಗಟ್ಟಿ ನಿಂತ ಟ್ರಾಕ್ಟರಗಳು :ಕಬ್ಬು ಕಟಾವು ಕಾರ್ಯ ಹಾಗೂ ನುರಿಸುವ ಕಾರ್ಯ ಬಂದ್ ಮಾಡಿದ್ದರಿಂದ ಅಮರಗೋಳ ಕ್ರಾಸ್ನಿಂದ ಗಂಗೂರ ಕ್ರಾಸ್ದವರೆಗೂ ಕಬ್ಬು ತುಂಬಿದ್ದ ಟ್ರಾಕ್ಟರಗಳು ಸಾಲುಗಟ್ಟಿ ನಿಂತಿದ್ದವು.ಅoದಾಜು 3 ಕಿ.ಮೀ ದೂರದವರೆಗೆ ಟ್ರಾö್ಯಕ್ಟರ್ಗಳು ನಿಂತುಕೊAಡಿದ್ದು ಅದರಲ್ಲಿ ಚಾಲಕರು ಸ್ಥಳದಲ್ಲಿಯೇ ಬುತ್ತಿ ಕಟ್ಟಿಕೊಂಡು ಬಂದು ಊಟ ಮಾಡುತ್ತ ಕೂತಿರುವ ದೃಶ್ಯಗಳು ಕಂಡು ಬಂದವು.ಹೋರಾಟದ ಸ್ಥಳದಲ್ಲಿಯೇ ಕೆಲವು ಮುಖಂಡರು ರೈತರಿಗೆ,ಟ್ರಾö್ಯಕ್ಟರ್ ಚಾಲಕರಿಗೆ ದಾಸೋಹಕ್ಕಾಗಿ ಸಹಾಯ ಮಾಡುತ್ತಿರುವುದು ಕಂಡು ಬಂದಿತು.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ