‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ ಕಾಯೂದ ಹೆಂಗ ಮಾಡ್ತಿ ?’ ಅಂದಾಗ ನಾನು “ಅವ್ವಾ ನೀ ತಲಿಕೆಡಿಸ್ಕೋ ಬ್ಯಾಡ ಬೇ, ನಾ ಅಲ್ಲಿ ಹೋಗಿ ನಮ್ಮ ದೇಶಕ್ಕೆ ಕಂಟಕರಾದವ್ರನ್ನ ಸಂಹಾರ ಮಾಡ್ತೀನಿ ಇಲ್ಲ ಇಲ್ಲಾಂದ್ರ ಅದೇ ಧ್ವಜ ಮೈಮ್ಯಾಲೆ ಹೊತ್ಕೊಂಡು ಬರ್ತಿನಿ” ಎಂದು ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಕಾಶೀಬಾಯಿ ಚಲವಾದಿ ಹೇಳಿದರು.

ಪಟ್ಟಣದ ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿಯಿಂದ ಈಚೇಗೆ ಹಮ್ಮಿಕೊಂಡಿದ್ದ ಸನ್ಮಾನಕ್ಕೆÀ ಉತ್ತರವಾಗಿ ಅವರು ಮಾತನಾಡಿದರು.

ಭಾರತೀಯ ಸೈನ್ಯದಲ್ಲಿ ಯುವತಿಯರಿಗೂ ಅವಕಾಶ ಸಿಗುತ್ತಿರುವುದು ನಿಜವಾಗಿಯೂ ಹೆಮ್ಮೆಯ ವಿಷಯ.ನಾನು ಹಿಂದುಳಿದ ದಲಿತ ಕುಟುಂಬದಲ್ಲಿ ಜನಿಸಿ ಒಂದನೇ ತರಗತಿಯಿಂದ ಪದವಿ ಶಿಕ್ಷಣದವರೆಗೆ ಸರಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕಲಿತಿರುವೆ. ನಾನು ದೇಶ ಸೇವೆಯನ್ನು ಆಯ್ದುಕೊಂಡಿದ್ದೇನೆ. ನನಗೆ ದೇಶದ ಗಡಿಕಾಯುವ ಸೌಭಾಗ್ಯ ಸಿಕ್ಕಿದ್ದಕ್ಕೆ ಇಡೀ ತಾಲೂಕು ಹೆಮ್ಮೆ ಪಟ್ಟಿರುವುದು ನನಗೆ ಶಕ್ತಿ ತುಂಬಿದೆ ಎಂದರು.

ವೇ. ಮಹಾದೇವಯ್ಯ ಶಾಸ್ತ್ರೀಗಳು ಮಾತನಾಡಿ, ಸೈನಿಕರು ತಮ್ಮ ವಯಕ್ತಿಕ ಬದುಕನ್ನು ಬಿಟ್ಟು ದೇಶದೊಳಗಿನ ನಾವೆಲರೂ ನೆಮ್ಮದಿಯಿಂದ ಜೀವನ ನಡೆಸಲು ಗಡಿ ಕಾಯ್ದು ಹೊರಗಿನ ಶತ್ರುಗಳಿಂದ ನಮ್ಮನ್ನು ರಕ್ಷಣೆ ಮಾಡುತ್ತಾರೆ.ಹಾಗೆ ದೇಶದೊಳಗಿನ ಶತ್ರುಗಳ ಬಗ್ಗೆ ನಾವೆಲ್ಲರೂ ನಿಗಾ ಇಡಬೇಕು. ಹಾಗೆ ಸೈನಿಕರ ಕುಟುಂಬದವರನ್ನು ಅತಿ ಹೆಚ್ಚು ಗೌರವದಿಂದ ಕಾಣಬೇಕು ಎಂದರು.

ಮುಖಂಡ ಪುನೀತ ಹಿಪ್ಪರಗಿ,ಹೋರಾಟಗಾರ ಬಸವರಾಜ ನಂದಿಕೇಶ್ವರಮಠ, ಸಾಹಿತಿ ಶಿವಪುತ್ರ ಅಜಮನಿ, ಪತ್ರಕರ್ತ ಪರಶುರಾಮ ಕೊಣ್ಣೂರ, ಮಾಜಿ ಸೈನಿಕ ರೇವಣೆಪ್ಪ ಹರಿಜನ ಮಾತನಾಡಿದರು, ಸಮೀತಿಯ ಅಧ್ಯಕ್ಷ ಶ್ರೀಕಾಂತ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಸಮೀತಿಯ ಪದಾಧಿಕಾರಿಗಳಾದ ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ, ಶೇಖರ ಢವಳಗಿ, ರಾಜು ಬಳ್ಳೊಳ್ಳಿ, ಕಾಶಿನಾಥ ಹುಗ್ಗಿ, ಸಂತೋಷ ಬಾದರಬಂಡಿ, ವರ್ತಕರಾದ ಮಾಣಿಕಚಂದ ದಂಡಾವತಿ, ಹುಲ್ಲೂರ ಗ್ರಾಮದ ಭೀಮನಗೌಡ ಬಿರಾದಾರ, ನಬೀಸಾಬ ಕಂಬಾರ, ತಾಲೂಕಾ ಪಿಂಜಾರ ಸಮಾಜದ ಅಧ್ಯಕ್ಷ ಎಂ.ಡಿ.ನದಾಫ್ ಅಮರಗೋಳ, ಮುತ್ತು ಚಲವಾದಿ,ರಾಜು ಮ್ಯಾಗೇರಿ ಹಾಗೂ ಕಾಶಿಬಾಯಿ ಚಲವಾದಿ ಅವರ ಕುಟುಂಬದ ಸದಸ್ಯರು ಇದ್ದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ