‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ ಕಾಯೂದ ಹೆಂಗ ಮಾಡ್ತಿ ?’ ಅಂದಾಗ ನಾನು “ಅವ್ವಾ ನೀ ತಲಿಕೆಡಿಸ್ಕೋ ಬ್ಯಾಡ ಬೇ, ನಾ ಅಲ್ಲಿ ಹೋಗಿ ನಮ್ಮ ದೇಶಕ್ಕೆ ಕಂಟಕರಾದವ್ರನ್ನ ಸಂಹಾರ ಮಾಡ್ತೀನಿ ಇಲ್ಲ ಇಲ್ಲಾಂದ್ರ ಅದೇ ಧ್ವಜ ಮೈಮ್ಯಾಲೆ ಹೊತ್ಕೊಂಡು ಬರ್ತಿನಿ” ಎಂದು ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಕಾಶೀಬಾಯಿ ಚಲವಾದಿ ಹೇಳಿದರು.

ಪಟ್ಟಣದ ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿಯಿಂದ ಈಚೇಗೆ ಹಮ್ಮಿಕೊಂಡಿದ್ದ ಸನ್ಮಾನಕ್ಕೆÀ ಉತ್ತರವಾಗಿ ಅವರು ಮಾತನಾಡಿದರು.

ಭಾರತೀಯ ಸೈನ್ಯದಲ್ಲಿ ಯುವತಿಯರಿಗೂ ಅವಕಾಶ ಸಿಗುತ್ತಿರುವುದು ನಿಜವಾಗಿಯೂ ಹೆಮ್ಮೆಯ ವಿಷಯ.ನಾನು ಹಿಂದುಳಿದ ದಲಿತ ಕುಟುಂಬದಲ್ಲಿ ಜನಿಸಿ ಒಂದನೇ ತರಗತಿಯಿಂದ ಪದವಿ ಶಿಕ್ಷಣದವರೆಗೆ ಸರಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕಲಿತಿರುವೆ. ನಾನು ದೇಶ ಸೇವೆಯನ್ನು ಆಯ್ದುಕೊಂಡಿದ್ದೇನೆ. ನನಗೆ ದೇಶದ ಗಡಿಕಾಯುವ ಸೌಭಾಗ್ಯ ಸಿಕ್ಕಿದ್ದಕ್ಕೆ ಇಡೀ ತಾಲೂಕು ಹೆಮ್ಮೆ ಪಟ್ಟಿರುವುದು ನನಗೆ ಶಕ್ತಿ ತುಂಬಿದೆ ಎಂದರು.

ವೇ. ಮಹಾದೇವಯ್ಯ ಶಾಸ್ತ್ರೀಗಳು ಮಾತನಾಡಿ, ಸೈನಿಕರು ತಮ್ಮ ವಯಕ್ತಿಕ ಬದುಕನ್ನು ಬಿಟ್ಟು ದೇಶದೊಳಗಿನ ನಾವೆಲರೂ ನೆಮ್ಮದಿಯಿಂದ ಜೀವನ ನಡೆಸಲು ಗಡಿ ಕಾಯ್ದು ಹೊರಗಿನ ಶತ್ರುಗಳಿಂದ ನಮ್ಮನ್ನು ರಕ್ಷಣೆ ಮಾಡುತ್ತಾರೆ.ಹಾಗೆ ದೇಶದೊಳಗಿನ ಶತ್ರುಗಳ ಬಗ್ಗೆ ನಾವೆಲ್ಲರೂ ನಿಗಾ ಇಡಬೇಕು. ಹಾಗೆ ಸೈನಿಕರ ಕುಟುಂಬದವರನ್ನು ಅತಿ ಹೆಚ್ಚು ಗೌರವದಿಂದ ಕಾಣಬೇಕು ಎಂದರು.

ಮುಖಂಡ ಪುನೀತ ಹಿಪ್ಪರಗಿ,ಹೋರಾಟಗಾರ ಬಸವರಾಜ ನಂದಿಕೇಶ್ವರಮಠ, ಸಾಹಿತಿ ಶಿವಪುತ್ರ ಅಜಮನಿ, ಪತ್ರಕರ್ತ ಪರಶುರಾಮ ಕೊಣ್ಣೂರ, ಮಾಜಿ ಸೈನಿಕ ರೇವಣೆಪ್ಪ ಹರಿಜನ ಮಾತನಾಡಿದರು, ಸಮೀತಿಯ ಅಧ್ಯಕ್ಷ ಶ್ರೀಕಾಂತ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಸಮೀತಿಯ ಪದಾಧಿಕಾರಿಗಳಾದ ಮಹಾಂತೇಶ ಬೂದಿಹಾಳಮಠ, ಚಂದ್ರು ಕಲಾಲ, ಶೇಖರ ಢವಳಗಿ, ರಾಜು ಬಳ್ಳೊಳ್ಳಿ, ಕಾಶಿನಾಥ ಹುಗ್ಗಿ, ಸಂತೋಷ ಬಾದರಬಂಡಿ, ವರ್ತಕರಾದ ಮಾಣಿಕಚಂದ ದಂಡಾವತಿ, ಹುಲ್ಲೂರ ಗ್ರಾಮದ ಭೀಮನಗೌಡ ಬಿರಾದಾರ, ನಬೀಸಾಬ ಕಂಬಾರ, ತಾಲೂಕಾ ಪಿಂಜಾರ ಸಮಾಜದ ಅಧ್ಯಕ್ಷ ಎಂ.ಡಿ.ನದಾಫ್ ಅಮರಗೋಳ, ಮುತ್ತು ಚಲವಾದಿ,ರಾಜು ಮ್ಯಾಗೇರಿ ಹಾಗೂ ಕಾಶಿಬಾಯಿ ಚಲವಾದಿ ಅವರ ಕುಟುಂಬದ ಸದಸ್ಯರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ