Youth come forward to pay the country's debt: Emperor's dowry

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲೇ ಬೇಕು. ಅವುಗಳೊಂದಿಗೆ ಇನ್ನೊಂದು ಋಣ ಸೇರಿಸಿಕೊಳ್ಳಬೇಕು. ಅದು ದೇಶದ ಋಣ ಎಂದು ನಾಡಿನ ಪ್ರಖರ ವಾಗ್ಮಿ, ಯುವ ಬ್ರಿಗೇಡ್, ಮಾರ್ಗದರ್ಶಕ ಚಕ್ರವರ್ತಿ
ಸೂಲಿಬೆಲಿ ಹೇಳಿದರು.

ಬುಧವಾರ ಅವರು ಪಟ್ಟಣದ ಮರಡಿ ಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಶ್ರೀಗಳ ದ್ವಾದಶ ಪಟ್ಟಾಧಿಕಾರ ಮಹೋತ್ಸವ ಹಾಗೂ ಮೌನ ಯೋಗಿಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿ, ಮಠ ಇರೋದು ಈ ಋಣಗಳನ್ನು ನಾವು ತೀರಿಸಲು ಪ್ರೇರಣೆ ಕೊಡುವುದಕ್ಕಾಗಿ. ಕಾರಣ ನಿಮ್ಮ ಮಕ್ಕಳಿಗೆ ಮಠಗಳಿಗೆ ಕಳಿಸಿ. ಈ ಐದು ಋಣಗಳ ಜೊತೆಗೆ ಮತ್ತೊಂದು ಋಣ ನಾವು ಸೇರಿಸಿಕೊಳ್ಳಬೇಕು. ಅದು ದೇಶದ ಋಣ. ಯಾವ ಊರಿನಲ್ಲಿ ಗುರುಸೇವೆ ಅತ್ಯಂತ ಭಕ್ತಿಯಿಂದ ನಡೆಯುತ್ತದೋ ಆ ಊರಿಗೆ ಭಗವಂತ ಎಂದೂ ಮೋಸ ಮಾಡುವುದಿಲ್ಲ ಎನ್ನುವುದಕ್ಕೆ ಈ ನಾಡಿನ ಪರಂಪರೆಯೇ
ಸಾಕ್ಷಿಯಾಗಿದೆ. ಮಠದ ಸ್ವಾಮಿಗಳ ಪೀಠ ಮುಳ್ಳಿನ ಹಾಸಿಗೆ ಇದ್ದಂತೆ. ಅದರ ಮೇಲೆ ಕುಳಿತಿರುವ ಸ್ವಾಮಿಗಳು ಭಕ್ತರ ಕಲ್ಯಾಣಕ್ಕಾಗಿ
ದೇವರಿಗೆ ಸದಾ ಪ್ರಾರ್ಥಿಸುತ್ತಾರೆ. ನಾನು ಯಾವುದೇ ಧರ್ಮ, ಮತದ ವಿರೋಧಿಯಲ್ಲ. ಹಿಂದು ಧರ್ಮದ ಉತ್ಕೃಷ್ಟವಾದ ಅಭಿಮಾನಿ ಅಂತ ಅಂದುಕೊಳ್ಳಿ ಎಂದರು.

ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೇ ದಾಳಿ ಮಾಡಿದ್ದಾರೆ. ಈ ದೇಶದ ಪ್ರವಾಸಿ ಜನ ಕಾಶ್ಮೀರಕ್ಕೆ ಸುತ್ತಾಡಿಕೊಂಡು ಬರಲು ಹೋದವರ ಮೇಲೆ ದಾಳಿ ಮಾಡಿದ್ದಾರೆ. ಪ್ರವಾಸಿಗರಿಗೆ ಹೆಸರು, ಧರ್ಮ ಕೇಳಿ ಹಿಂದುಗಳನ್ನಷ್ಟೇ ಕೊಂದಿದ್ದಾರೆ. ಹೆಣ್ಣು
ಮಕ್ಕಳನ್ನು ಬಿಟ್ಟಿದ್ದಾರೆ. ನಮ್ಮನ್ನು ಯಾಕೆ ಬಿಟ್ಟಿದ್ದಿರಿ ನಮ್ಮನ್ನು ಕೊಂದು ಬಿಡಿ ಎಂದಿದ್ದಕ್ಕೆ, ಅದು ಇಂದು ಪುನರ್‌ನಿರ್ಮಾಣವಾಗಬೇಕಿದೆ.
ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ನೀಡಬೇಕಿದೆ. ಮೊಬೈಲ್, ಟಿವಿ ಹಾವಳಿಯಿಂದ ಮುಕ್ತಗೊಳಿಸಬೇಕಾಗಿದೆ. ಯುವಕರು ದೇಶಭಕ್ತಿ ಬೆಳೆಸಿಕೊಳ್ಳಬೇಕು. ಹಿಂದು ಧರ್ಮವನ್ನು ಬಿಟ್ಟು ನಿನ್ನೆ ಮೊನ್ನೆ ಹುಟ್ಟಿದ ಧರ್ಮಕ್ಕೆ ಹೋಗಿ ಮತಾಂತರವಾಗುವವರಿಗೆ ಹೇಳಿ, ಹಿಂದೂ ಧರ್ಮ ಅತ್ಯಂತ ಹಳೆಯದಾದ ಧರ್ಮ ಅಂತ ಎಂದರು.

ವೇದಿಕೆ ಮೇಲೆ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಶ್ರೀಗಳು, ನಿಡಗುಂದಿಕೊಪ್ಪದ ಚನ್ನಬಸವ ಶ್ರೀಗಳು, ಕೆಲ್ಲೂರದ ಶಿವಕುಮಾರ ದೇವರು ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಮೃತಶಿಲಾ ಮೂರ್ತಿಯ ಭಕ್ತಿ ಸೇವೆ ಜರುಗಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ