Youth come forward to pay the country's debt: Emperor's dowry

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲೇ ಬೇಕು. ಅವುಗಳೊಂದಿಗೆ ಇನ್ನೊಂದು ಋಣ ಸೇರಿಸಿಕೊಳ್ಳಬೇಕು. ಅದು ದೇಶದ ಋಣ ಎಂದು ನಾಡಿನ ಪ್ರಖರ ವಾಗ್ಮಿ, ಯುವ ಬ್ರಿಗೇಡ್, ಮಾರ್ಗದರ್ಶಕ ಚಕ್ರವರ್ತಿ
ಸೂಲಿಬೆಲಿ ಹೇಳಿದರು.

ಬುಧವಾರ ಅವರು ಪಟ್ಟಣದ ಮರಡಿ ಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಶ್ರೀಗಳ ದ್ವಾದಶ ಪಟ್ಟಾಧಿಕಾರ ಮಹೋತ್ಸವ ಹಾಗೂ ಮೌನ ಯೋಗಿಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿ, ಮಠ ಇರೋದು ಈ ಋಣಗಳನ್ನು ನಾವು ತೀರಿಸಲು ಪ್ರೇರಣೆ ಕೊಡುವುದಕ್ಕಾಗಿ. ಕಾರಣ ನಿಮ್ಮ ಮಕ್ಕಳಿಗೆ ಮಠಗಳಿಗೆ ಕಳಿಸಿ. ಈ ಐದು ಋಣಗಳ ಜೊತೆಗೆ ಮತ್ತೊಂದು ಋಣ ನಾವು ಸೇರಿಸಿಕೊಳ್ಳಬೇಕು. ಅದು ದೇಶದ ಋಣ. ಯಾವ ಊರಿನಲ್ಲಿ ಗುರುಸೇವೆ ಅತ್ಯಂತ ಭಕ್ತಿಯಿಂದ ನಡೆಯುತ್ತದೋ ಆ ಊರಿಗೆ ಭಗವಂತ ಎಂದೂ ಮೋಸ ಮಾಡುವುದಿಲ್ಲ ಎನ್ನುವುದಕ್ಕೆ ಈ ನಾಡಿನ ಪರಂಪರೆಯೇ
ಸಾಕ್ಷಿಯಾಗಿದೆ. ಮಠದ ಸ್ವಾಮಿಗಳ ಪೀಠ ಮುಳ್ಳಿನ ಹಾಸಿಗೆ ಇದ್ದಂತೆ. ಅದರ ಮೇಲೆ ಕುಳಿತಿರುವ ಸ್ವಾಮಿಗಳು ಭಕ್ತರ ಕಲ್ಯಾಣಕ್ಕಾಗಿ
ದೇವರಿಗೆ ಸದಾ ಪ್ರಾರ್ಥಿಸುತ್ತಾರೆ. ನಾನು ಯಾವುದೇ ಧರ್ಮ, ಮತದ ವಿರೋಧಿಯಲ್ಲ. ಹಿಂದು ಧರ್ಮದ ಉತ್ಕೃಷ್ಟವಾದ ಅಭಿಮಾನಿ ಅಂತ ಅಂದುಕೊಳ್ಳಿ ಎಂದರು.

ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೇ ದಾಳಿ ಮಾಡಿದ್ದಾರೆ. ಈ ದೇಶದ ಪ್ರವಾಸಿ ಜನ ಕಾಶ್ಮೀರಕ್ಕೆ ಸುತ್ತಾಡಿಕೊಂಡು ಬರಲು ಹೋದವರ ಮೇಲೆ ದಾಳಿ ಮಾಡಿದ್ದಾರೆ. ಪ್ರವಾಸಿಗರಿಗೆ ಹೆಸರು, ಧರ್ಮ ಕೇಳಿ ಹಿಂದುಗಳನ್ನಷ್ಟೇ ಕೊಂದಿದ್ದಾರೆ. ಹೆಣ್ಣು
ಮಕ್ಕಳನ್ನು ಬಿಟ್ಟಿದ್ದಾರೆ. ನಮ್ಮನ್ನು ಯಾಕೆ ಬಿಟ್ಟಿದ್ದಿರಿ ನಮ್ಮನ್ನು ಕೊಂದು ಬಿಡಿ ಎಂದಿದ್ದಕ್ಕೆ, ಅದು ಇಂದು ಪುನರ್‌ನಿರ್ಮಾಣವಾಗಬೇಕಿದೆ.
ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ನೀಡಬೇಕಿದೆ. ಮೊಬೈಲ್, ಟಿವಿ ಹಾವಳಿಯಿಂದ ಮುಕ್ತಗೊಳಿಸಬೇಕಾಗಿದೆ. ಯುವಕರು ದೇಶಭಕ್ತಿ ಬೆಳೆಸಿಕೊಳ್ಳಬೇಕು. ಹಿಂದು ಧರ್ಮವನ್ನು ಬಿಟ್ಟು ನಿನ್ನೆ ಮೊನ್ನೆ ಹುಟ್ಟಿದ ಧರ್ಮಕ್ಕೆ ಹೋಗಿ ಮತಾಂತರವಾಗುವವರಿಗೆ ಹೇಳಿ, ಹಿಂದೂ ಧರ್ಮ ಅತ್ಯಂತ ಹಳೆಯದಾದ ಧರ್ಮ ಅಂತ ಎಂದರು.

ವೇದಿಕೆ ಮೇಲೆ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಶ್ರೀಗಳು, ನಿಡಗುಂದಿಕೊಪ್ಪದ ಚನ್ನಬಸವ ಶ್ರೀಗಳು, ಕೆಲ್ಲೂರದ ಶಿವಕುಮಾರ ದೇವರು ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಮೃತಶಿಲಾ ಮೂರ್ತಿಯ ಭಕ್ತಿ ಸೇವೆ ಜರುಗಿತು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ