Youth come forward to pay the country's debt: Emperor's dowry

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

Ad
Ad

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲೇ ಬೇಕು. ಅವುಗಳೊಂದಿಗೆ ಇನ್ನೊಂದು ಋಣ ಸೇರಿಸಿಕೊಳ್ಳಬೇಕು. ಅದು ದೇಶದ ಋಣ ಎಂದು ನಾಡಿನ ಪ್ರಖರ ವಾಗ್ಮಿ, ಯುವ ಬ್ರಿಗೇಡ್, ಮಾರ್ಗದರ್ಶಕ ಚಕ್ರವರ್ತಿ
ಸೂಲಿಬೆಲಿ ಹೇಳಿದರು.

Ad
Ad

ಬುಧವಾರ ಅವರು ಪಟ್ಟಣದ ಮರಡಿ ಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಶ್ರೀಗಳ ದ್ವಾದಶ ಪಟ್ಟಾಧಿಕಾರ ಮಹೋತ್ಸವ ಹಾಗೂ ಮೌನ ಯೋಗಿಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿ, ಮಠ ಇರೋದು ಈ ಋಣಗಳನ್ನು ನಾವು ತೀರಿಸಲು ಪ್ರೇರಣೆ ಕೊಡುವುದಕ್ಕಾಗಿ. ಕಾರಣ ನಿಮ್ಮ ಮಕ್ಕಳಿಗೆ ಮಠಗಳಿಗೆ ಕಳಿಸಿ. ಈ ಐದು ಋಣಗಳ ಜೊತೆಗೆ ಮತ್ತೊಂದು ಋಣ ನಾವು ಸೇರಿಸಿಕೊಳ್ಳಬೇಕು. ಅದು ದೇಶದ ಋಣ. ಯಾವ ಊರಿನಲ್ಲಿ ಗುರುಸೇವೆ ಅತ್ಯಂತ ಭಕ್ತಿಯಿಂದ ನಡೆಯುತ್ತದೋ ಆ ಊರಿಗೆ ಭಗವಂತ ಎಂದೂ ಮೋಸ ಮಾಡುವುದಿಲ್ಲ ಎನ್ನುವುದಕ್ಕೆ ಈ ನಾಡಿನ ಪರಂಪರೆಯೇ
ಸಾಕ್ಷಿಯಾಗಿದೆ. ಮಠದ ಸ್ವಾಮಿಗಳ ಪೀಠ ಮುಳ್ಳಿನ ಹಾಸಿಗೆ ಇದ್ದಂತೆ. ಅದರ ಮೇಲೆ ಕುಳಿತಿರುವ ಸ್ವಾಮಿಗಳು ಭಕ್ತರ ಕಲ್ಯಾಣಕ್ಕಾಗಿ
ದೇವರಿಗೆ ಸದಾ ಪ್ರಾರ್ಥಿಸುತ್ತಾರೆ. ನಾನು ಯಾವುದೇ ಧರ್ಮ, ಮತದ ವಿರೋಧಿಯಲ್ಲ. ಹಿಂದು ಧರ್ಮದ ಉತ್ಕೃಷ್ಟವಾದ ಅಭಿಮಾನಿ ಅಂತ ಅಂದುಕೊಳ್ಳಿ ಎಂದರು.

ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೇ ದಾಳಿ ಮಾಡಿದ್ದಾರೆ. ಈ ದೇಶದ ಪ್ರವಾಸಿ ಜನ ಕಾಶ್ಮೀರಕ್ಕೆ ಸುತ್ತಾಡಿಕೊಂಡು ಬರಲು ಹೋದವರ ಮೇಲೆ ದಾಳಿ ಮಾಡಿದ್ದಾರೆ. ಪ್ರವಾಸಿಗರಿಗೆ ಹೆಸರು, ಧರ್ಮ ಕೇಳಿ ಹಿಂದುಗಳನ್ನಷ್ಟೇ ಕೊಂದಿದ್ದಾರೆ. ಹೆಣ್ಣು
ಮಕ್ಕಳನ್ನು ಬಿಟ್ಟಿದ್ದಾರೆ. ನಮ್ಮನ್ನು ಯಾಕೆ ಬಿಟ್ಟಿದ್ದಿರಿ ನಮ್ಮನ್ನು ಕೊಂದು ಬಿಡಿ ಎಂದಿದ್ದಕ್ಕೆ, ಅದು ಇಂದು ಪುನರ್‌ನಿರ್ಮಾಣವಾಗಬೇಕಿದೆ.
ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ನೀಡಬೇಕಿದೆ. ಮೊಬೈಲ್, ಟಿವಿ ಹಾವಳಿಯಿಂದ ಮುಕ್ತಗೊಳಿಸಬೇಕಾಗಿದೆ. ಯುವಕರು ದೇಶಭಕ್ತಿ ಬೆಳೆಸಿಕೊಳ್ಳಬೇಕು. ಹಿಂದು ಧರ್ಮವನ್ನು ಬಿಟ್ಟು ನಿನ್ನೆ ಮೊನ್ನೆ ಹುಟ್ಟಿದ ಧರ್ಮಕ್ಕೆ ಹೋಗಿ ಮತಾಂತರವಾಗುವವರಿಗೆ ಹೇಳಿ, ಹಿಂದೂ ಧರ್ಮ ಅತ್ಯಂತ ಹಳೆಯದಾದ ಧರ್ಮ ಅಂತ ಎಂದರು.

ವೇದಿಕೆ ಮೇಲೆ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಶ್ರೀಗಳು, ನಿಡಗುಂದಿಕೊಪ್ಪದ ಚನ್ನಬಸವ ಶ್ರೀಗಳು, ಕೆಲ್ಲೂರದ ಶಿವಕುಮಾರ ದೇವರು ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಮೃತಶಿಲಾ ಮೂರ್ತಿಯ ಭಕ್ತಿ ಸೇವೆ ಜರುಗಿತು.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,