ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.
ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿವೆ. ಗ್ರಾಮೀಣ ಭಾಗದಲ್ಲಿ ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಈ ವರ್ಷದ ಪ್ರಥಮ ಬ್ಯಾಚ್ನಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಳ್ಳುವ ವಿದ್ಯಾರ್ಥಿಗೆ ಅಸ್ಕಿ ಫೌಂಡೇಶನ್ದಿoದ 25 ಸಾವಿರ ರೂ.ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದರು.
ಮುದ್ದೇಬಿಹಾಳ ಬಸವಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಇಸ್ಲಾಂಪೂರ ಮಾತನಾಡಿ, ಕಷ್ಟದ ಜೀವನ ಸವೆಸಿ ಧೈರ್ಯದಿಂದ ಮುಂದಡಿಯಿಟ್ಟಿದ್ದಕ್ಕೆ ಪ್ರತಿಭಾವಂತ ಮಕ್ಕಳನ್ನು ಗುರುತಿಸುವಂತಹ ಶಿಕ್ಷಣ ಸಂಸ್ಥೆ ರೂಪಿಸಲು ಸಾಧ್ಯವಾಗಲಿದೆ.ಒಳ್ಳೆಯ ಪ್ರಜೆಯಾಗಿ ಒಳ್ಳೆಯ ಸಂದೇಶವನ್ನು ನೀಡುವ ಕಾರ್ಯ ಮಾಡುವ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎಸ್.ಎಸ್.ಎಲ್.ಸಿ ಪ್ರಥಮ ಬ್ಯಾಚಿನಲ್ಲಿ ಅತೀ ಹೆಚ್ಚು ಅಂಕ ಪಡೆದು ಎರಡನೇ ಸ್ಥಾನ ಗಳಿಸಿದವರಿಗೆ 11 ಸಾವಿರ ರೂ.ನೀಡುವುದಾಗಿ ಘೋಷಣೆ ಮಾಡಿದರು.
ದಿವ್ಯ ಸಾನಿಧ್ಯ ವಹಿಸಿದ್ದ ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ಹಳ್ಳಿಯ ಮಕ್ಕಳ ಶಿಕ್ಷಣದ ಕನಸನ್ನು ನನಸು ಮಾಡುತ್ತಿರುವ ಎಂ.ಎಸ್.ಕೊಪ್ಪ ಅವರ ಕಾರ್ಯದ ಹಿಂದೆ ಅಪಾರ ಪರಿಶ್ರಮವಿದೆ.ಸಂಸ್ಥೆಗೆ ಸದಾ ನಾವು ಬೆನ್ನೆಲುಬಾಗಿ ಇರುತ್ತೇವೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ನಾನು ಗೌಂಡಿ ಕೈಯ್ಯಲ್ಲಿ ಗಾರೆ ಕೆಲಸವನ್ನು ಮಾಡಿದ್ದೇನೆ.ಹೊಲದಲ್ಲಿ ಕೃಷಿ ಕೆಲಸವನ್ನು ಮಾಡಿದ್ದೇನೆ.ಮತ್ತೊಬ್ಬರ ಬಳಿ ಆಳಾಗಿಯೂ ಕೆಲಸ ಮಾಡಿದ್ದೇನೆ.ಆದರೆ ನನ್ನ ಕನಸು ಬಡವರ ಮಕ್ಕಳು ಶಿಕ್ಷಣ ಪಡೆದುಕೊಳ್ಳಬೇಕಾದರೆ ಕಷ್ಟಪಡಬಾರದು ಎಂಬ ಉದ್ದೇಶದಿಂದ ಈ ಸಂಸ್ಥೆ ಕಟ್ಟಿದ್ದೇನೆ.ಜಮಖಂಡಿ ಓಲೇಮಠದ ದಿ.ಚನ್ನಬಸವ ಸ್ವಾಮೀಜಿಯವರ ಆಶೀರ್ವಾದ ಸಂಸ್ಥೆಯ ಮೇಲಿದೆ ಎಂದರು.
ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ, ವಿಶ್ವಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿರೇಶ ಗುರುಮಠ, ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎ.ಲೋನಾರಮಠ,ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ,ಪ್ರಮುಖರಾದ ಯಮನಪ್ಪ ಪೂಜಾರಿ,ಮಹದೇವಪ್ಪ ಹಳ್ಳದ,ರಾಮನಗೌಡ ಬಿರಾದಾರ,ಚಂದ್ರಶೇಖರ ಕುಂಬಾರ,ನಿoಗಪ್ಪ ಓಲೇಕಾರ,ಸುಭಾಷ ಕಟ್ಟೀಮನಿ,ಹಣಮಂತ್ರಾಯ ಮಾದಿನಾಳ,ಮಲ್ಲಯ್ಯ ಹಿರೇಮಠ ಮೊದಲಾದವರು ಇದ್ದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳು ಅತೀ ಹೆಚ್ಚಿನ ಅಂಕ ಪಡೆದುಕೊಳ್ಳುವ ತೃತೀಯ,ನಾಲ್ಕನೇ,ಐದನೇ ಬಹುಮಾನಗಳನ್ನು ವೇದಿಕೆಯಲ್ಲಿದ್ದ ಕರಿಯಪ್ಪ ಆಸಂಗಿ, ನಾನಪ್ಪ ಲಮಾಣಿ, ಬಸವರಾಜ ಸಂಕನಾಳ ನೀಡುವುದಾಗಿ ವಾಗ್ದಾನ ಮಾಡಿದರು. ಎಚ್.ಆರ್.ಬಾಗಲಕೋಟ ಸ್ವಾಗತಿಸಿದರು.ನಂದಿನಿ ಪವಾರ ವರದಿ ವಾಚಿಸಿದರು. ಅಶೋಕ ಗುಂಡಿನಮನಿ ನಿರೂಪಿಸಿದರು.
ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ
ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ
Latest News
58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ
ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ







