Two children drowned in the lake; Minister Santhosh Lad visited Yarinarayanpur village

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 21: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು.

ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ‌. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಸಹ ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.

ಜಿಲ್ಲಾಡಳಿತದಿಂದ ಕೆರೆಗೆ ತಡೆಗೋಡೆ ನಿರ್ಮಾಣ

ಯರಿನಾರಾಯಣಪುರ ಗ್ರಾಮದ ಕೆರೆಗೆ ಜಿಲ್ಲಾಡಳಿತದಿಂದ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಇಂತಹ ಅವಘಡಗಳನ್ನು ತಡೆಯಲಾಗುವುದಿಲ್ಲ. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಶಾಸಕರ ಅನುದಾನದಿಂದ ತಡೆಗೋಡೆ ನಿರ್ಮಾಣ ಮಾಡಬಹುದಾಗಿತ್ತು. ತಡೆಗೋಡೆ ನಿರ್ಮಾಣದಿಂದ ಸಮಸ್ಯೆಗಳು ಪರಿಹರಿಯುವುದಿಲ್ಲ. ಗ್ರಾಮಸ್ಥರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಅಂಗನವಾಡಿ ಕೇಂದ್ರ ಸ್ಥಳಾಂತರ

ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ‌ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ‌‌. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದರು.

ಕುಟುಂಬಸ್ಥರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಮನವಿ

ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಸ್ವತಃ ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂತೋಷ್‌ ಲಾಡ್ ಫೌಂಡೇಶನ್ ನಿಂದ ಧನ ಸಹಾಯ

ಸಂತೋಷ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರರಾದ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತಿತರರು ಉಪಸ್ಥಿತರಿದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು