ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ ದಿ.ಚೆನ್ನಣ್ಣ ದೇಸಾಯಿ ಅವರ ಐದನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಜ.19 ರಿಂದ 21ರವರೆಗೆ ವಿವಿಧ ಧಾರ್ಮಿಕ,ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರ ನಿವಾಸದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದಾಸೋಹ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ,ಭಕ್ತ ಹಿತಚಿಂತನಾ ಸಭೆ,ರಾಷ್ಟಿçÃಯ ನಾಟಕೋತ್ಸವ,ಎಸ್.ಎಸ್.ಎಲ್.ಸಿ,ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ,ಪೌರಕಾರ್ಮಿಕರಿಗೆ ಸನ್ಮಾನ ನಡೆಯಲಿದ್ದು ಹುಡ್ಕೋದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಈ ಎಲ್ಲ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಮುದ್ದೇಬಿಹಾಳ ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಸನ್ಮಾನ ಏರ್ಪಡಿಸಲಾಗಿದೆ.ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಪ್ರಥಮ ದ್ವಿತೀಯ ಬಂದವರಿಗೆ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಇಟ್ಟಿರುವ ಬಡ್ಡಿ ಹಣದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.60 ವರ್ಷ ಆದವರಿಗೆ ವಾಕಿಂಗ್ ಸ್ಟಿಕ್ ನೀಡಲು ಯೋಜಿಸಲಾಗಿದೆ ಎಂದರು.

ಮೂರು ದಿನಗಳ ಕಾಲ ಉಚಿತವಾಗಿ ನಾಟಕೋತ್ಸವ ನಡೆಯಲಿದೆ. ಟಿವಿ,ಮೊಬೈಲ್‌ದಿಂದ ದೂರವಾಗಿ ಸಾಂಪ್ರದಾಯಿಕ ನಾಟಕ ಕಲೆಯತ್ತ ಜನರನ್ನು ಸೆಳೆಯುವ ಸಲುವಾಗಿ ಸಾಣೇಹಳ್ಳಿ ಮಠದ ಶಿವಕುಮಾರ ಕಲಾಸಂಘದ (ಶಿವಸಂಚಾರ) ತಂಡದಿಂದ ಮೂರು ದಿನಗಳ ನಾಟಕೋತ್ಸವ ಆಯೋಜಿಸಲಾಗಿದೆ. ಜ.19 ರಂದು ಜಂಗಮದೆಡೆಗೆ, ಜ.20 ರಂದು ಕಳ್ಳರಸಂತೆ, ಜ.21 ಶಿವಯೋಗಿ ಸಿದ್ಧರಾಮ ನಾಟಕಗಳು ಜರುಗಲಿವೆ.ಪ್ರತಿ ದಿನ ಸಂಜೆ 7ಕ್ಕೆ ಗವಿಸಿದ್ದೇಶ್ವರ ವೇದಿಕೆಯಲ್ಲಿ ಈ ನಾಟಕಗಳ ಪ್ರದರ್ಶನ ಇರಲಿದೆ ಎಂದು ತಿಳಿಸಿದರು.ಜ.21 ರಂದು ಬೆಳಗ್ಗೆ 8ಕ್ಕೆ ಹಡಲಗೇರಿಯ ಹುಲಿಗೆಮ್ಮ ದೇವಿ ಭಜನಾ ಮಂಡಳಿಯಿದ ತತ್ವಪದಗಳ ಭಜನಾಂಜಲಿ ಕಾರ್ಯಕ್ರಮ ನಡೆಯಲಿದೆ.ಪೂಜ್ಯರು ಬಿಟ್ಟರೆ ಬೇರೆ ಯಾವ ವ್ಯಕ್ತಿಗಳ ವೈಭವೀಕರಣ ಇರುವುದಿಲ್ಲ.ಧಾರ್ಮಿಕ ಆಧ್ಯಾತ್ಮಿಕ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಪೂರ್ವಭಾವಿ ಸಭೆಯಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಗಣ್ಯರಾದ ಎಂ.ಬಿ.ನಾವದಗಿ, ಬಿ.ವಿ.ಕೋರಿ, ಮಾತನಾಡಿದರು.

ಕೆಯುಸಿ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್,ಜಿಒಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಹೂಗಾರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಶರಣು ಸಜ್ಜನ,ಬಸವರಾಜ ದಡ್ಡಿ, ಬಸವರಾಜ ಲಿಂಗದಳ್ಳಿ , ರಾಮಚಂದ್ರ ಹೆಗಡೆ,ಬಾಪುಗೌಡ ಪೀರಾಪೂರ,ಎಂ.ಡಿ.ಕುಂಬಾರ,ರಾಜುಗೌಡ ಗೌಡರ,ಅರವಿಂದ ಕಾಶಿನಕುಂಟಿ,ವೀರೇಶ ಢವಳಗಿ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ